page1

Pages

Showing posts with label ಅಗಲಿಕೆ. Show all posts
Showing posts with label ಅಗಲಿಕೆ. Show all posts

Saturday, April 12, 2008

ಮಳೆ ನಿಂತು ಹೋದ ಮೇಲೆ ಹನಿ ಎರಡು ಉದುರಿದೆ

Dr.Rajtejaswi
ಮೋಜಿನ ಮಳೆ ನಿಂತು ಆಗಲೇ ನಾಲ್ಕೈದು ದಿನವಾಯ್ತು. ಆದರೆ ಈ ವಾರ ಅಂತಹ ಸಂಭ್ರಮವಿಲ್ಲ. ಮಧ್ಯದಲ್ಲಿ ಯುಗಾದಿ ಹಬ್ಬ , ಹೋಳಿಗೆ ಊಟ ಮೆದ್ದಿದ್ದು ಬಿಟ್ಟರೆ.

ಬಾಕಿಯಂತೆ ಏ.೫ ರಿಂದ ಏ ೧೨ ರ ವರೆಗೂ ಮನಸ್ಸಿಗೆ ಇಬ್ಬರನ್ನು ನೆನೆಯದೇ ಇರಲು ಸಾಧ್ಯವಾಗುವುದಿಲ್ಲ. ನೆಚ್ಚಿನ ಗುರು, ಮಾರ್ಗದರ್ಶಿ ತೇಜಸ್ವಿ , ನಾಡಿನ ಸಾಂಸ್ಕೃತಿಕ ಸಂಕೇತ ಡಾ. ರಾಜ್ ಕುಮಾರ್.

ತೇಜಸ್ವಿ ನಿರುತ್ತರದಲ್ಲಿ ಕವಿದ ಮೋಡ ಚದುರಿ ಮಳೆ ಸುರಿಸಿ, ಹರುಷವನ್ನು ಅರಿಸಿ ಸಾಗುತ್ತಿದೆ. ರಾಜ್ ನೆನಪಿನಲ್ಲಿ ಸ್ಮಾರಕ ಎಂಬ ನೆಪದಲ್ಲಿ ರಾಜ್ ಅವರ ಕನಸುಗಳು ಕಮರುತ್ತಿದೆ. ಈ ಇಬ್ಬರು ಸರಳ ಜೀವಿಗಳು ಇಂದಿನವರ ಜಂಜಾಟವನ್ನು ನೋಡುತ್ತಿದ್ದರೆ ಖಂಡಿತಾ ಖಾರವಾಗಿ ಪ್ರತಿಕ್ರಿಯಿಸುತ್ತಿದ್ದರು ಎನಿಸುತ್ತದೆ.

ಸ್ಮಾರಕ ನಿರ್ಮಾಣ, ಅರ್ಥವಿಲ್ಲದ ಆಚರಣೆಗೆ ತೇಜಸ್ವಿಯಂತೂ ವಿರೋಧಿಸುತ್ತಿದ್ದರು. ರಾಜ್ ಅವರು ಜೀವನದುದ್ದಕ್ಕೂ ಸರಳತೆಯನ್ನು ಮೈಗೂಡಿಕೊಂಡು ಬೆಳೆದವರು. ನಗರದಲ್ಲಿದ್ದರೂ ಸದಾ ಹಳ್ಳಿಮನೆಯ ವಾಸ್ತವ್ಯಕ್ಕಾಗಿ ಹಾತೊರೆಯುತ್ತಿದ್ದ ಜೀವ.

ತೇಜಸ್ವಿ ನಿಸರ್ಗದ ರಮಣೀಯತೆಗೆ ಸೋತು, ಪ್ರಕೃತಿಯ ಮಡಿಲಲ್ಲಿ ಸಾಧನೆ, ಸಂಶೋಧನೆ ಮಾಡುತ್ತಾ, ಮುಗ್ಧ ಜನರೊಡನೆ ಬೆರೆತು ಸಾರ್ಥಕ ಬದುಕು ಬಾಳಿದವರು. ಈ ಎರಡು ಚೇತನಗಳಲ್ಲಿ ನಾನು ಇಷ್ಟಪಡುವುದು ಸರಳತೆ ಹಾಗೂ ಜೀವನ ಪ್ರೀತಿ, ಉತ್ಸಾಹ.

ಇವರಿಬ್ಬರ ಚಿಂತನೆಗಳು ಸ್ಮಾರಕಕ್ಕೆ ಸೀಮಿತವಾಗದೇ ಅವರ ಸಾಧನೆ, ಜೀವನ ಪ್ರೀತಿ ಎಲ್ಲರಲ್ಲೂ ಆಸುಹೊಕ್ಕದರೆ ಎಷ್ಟು ಸುಂದರ. ಅದ್ಭುತ ಮಾಯಾಲೋಕದ ಕನಸು ಕಣ್ಮುಂದೆ ಕಾಣಿಸುತ್ತಿದೆ. ವಿರಮಿಸುತ್ತೇನೆ ಸದ್ಯಕ್ಕೆ.